FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Monday 18 August 2014



 ಕನ್ನಡ ಅಧ್ಯಾಪಕರು ಕೇರಳ ಕರ್ನಾಟಕ ರಾಜ್ಯಗಳ ಸಾಂಸ್ಕೃತಿಕ ರಾಯಭಾರಿಗಳಾಗಲಿ

ಬಂದಡ್ಕ, ಆಗಸ್ಟ್ 9. ಗಡಿನಾಡ ಪ್ರದೇಶದಲ್ಲಿ ವಾಸಿಸುವ ಜನರಿಗೆ ಕನ್ನಡ ಮಾಧ್ಯಮದಲ್ಲಿ ಕಲಿತರೆ ಕೇರಳ ಕರ್ನಾಟಕ ರಾಜ್ಯಗಳೆರಡರಲ್ಲೂ ಸಲೀಸಾಗಿ ವ್ಯವಹಾರ ಮಾಡಲು ಸಾಧ್ಯವಾಗುವುದು. ಪ್ರಾದೇಶಿಕವಾಗಿ ಕೇರಳದಲ್ಲಿ ವಾಸಿಸುವ ನಮಗೆ ಕರ್ನಾಟಕದಲ್ಲಿಯೂ ಶಿಕ್ಷಣ ಮುಂದುವರಿಸುವ ಮತ್ತು ಉದ್ಯೋಗ ಮಾಡುವ ಅವಕಾಶವಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಲು ಅಗತ್ಯವಾದ ಪರಿಕರಗಳ ಕೊರತೆಯನ್ನು ನೀಗಿಸುವ ಕಾರ್ಯಕ್ಕಾಗಿ ಹುಟ್ಟಿಕೊಂಡ ಕನ್ನಡ ಅಧ್ಯಾಪಕ ಸಂಘಟನೆ ಕೇರಳ ಕರ್ನಾಟಕ ರಾಜ್ಯಗಳ ಸಾಂಸ್ಕೃತಿಕ ರಾಯಭಾರಿಗಳಾಗಲಿ .ನಮ್ಮ ಮಕ್ಕಳು ಶಿಸ್ತು ಬದ್ಧ ಜೀವನವನ್ನು ರೂಪಿಸಲು ಅಗತ್ಯವಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಲು ಸಾಧ್ಯವಾಗುವಂತಹ ಸ್ಥಿತಿಯನ್ನು ನಮ್ಮ ಎಲ್ಲಾ ಶಾಲೆಗಳಲ್ಲೂ ನಿರ್ಮಾಣವಾಗುವಂತೆ ಮಾಡುವಲ್ಲಿ ಕಾರ್ಯನಿರತರಾಗಬೇಕು, ಇದರಿಂದ ಕಾಸರಗೋಡಿನ ಕನ್ನಡಕ್ಕೆ ಇನ್ನಷ್ಟು ಹೊಳಪು ಬರಬಹುದು ಎ೦ದು ನಿವೃತ್ತ ಕನ್ನಡ ಶಿಕ್ಷಕರಾದ ಬಿ.ಎನ್.ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಕಾಸರಗೋಡು ಉಪಜಿಲ್ಲಾ ಘಟಕದ ಮಹಾಸಭೆಯನ್ನು ಉದ್ಘಾಟಿ ಸಿ ಮಾತನಾಡುತ್ತಿದ್ದರು. ಸಂಘಟನೆಯ ಉಪಜಿಲ್ಲಾ ಮಹಾಸಭೆ ಜಿ.ಎಚ್ .ಎಸ್.ಎಸ್. ಬಂದಡ್ಕದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಪದ್ಮನಾಭ ಎಸ್.ಎಸ್., ಅಧಿಕೃತ ವಕ್ತಾರರಾದ ವಿಶಾಲಾಕ್ಷ ಪುತ್ರಕಳ, ಉಪಸ್ಥಿತರಿದ್ದರು. ದಿನೇಶ್ ಬಿ. ಸ್ವಾಗತಿಸಿ, ನಿತ್ಯಾನಂದ ಎ೦.ಕೆ. ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಾರ್ಷಿಕ ವರದಿ,ಲೆಕ್ಕಪತ್ರ ಮಂಡನೆಯ ಬಳಿಕ ಸದಸ್ಯರಿಂದ ಸಮಸ್ಯೆಗಳ ಮಂಡನೆ ಮತ್ತು ಚರ್ಚೆ ನಡೆಯಿತು. ಸಂಘಟನೆಯ ಕೇಂದ್ರ ಉಪಾಧ್ಯಕ್ಷಾದ ಮಹಾಲಿಂಗೇಶ್ವರ ಭಟ್ ಎ೦.ವಿ. ಮತ್ತು ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ. ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಬಳಿಕ ಉಪಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರಾಜೇಶ್ವರ ಸಿ.ಎಚ್. ಅಧ್ಯಕ್ಷರಾಗಿ ಪ್ರೀತಂ ಎ.ಕೆ.ಕಾರ್ಯದರ್ಶಿಯಾಗಿ ಮತ್ತು ಖಜಾಂಜಿಯಾಗಿ ಬಾಬು ಆಯ್ಕೆಯಾದರು.ನೂತನ ಪದಾಧಿಕಾರಿಗಳಿಂದ ಅಧಿಕಾರ ಸ್ವೀಕಾರ ನಡೆಯಿತು.

No comments:

Post a Comment