FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Sunday 20 February 2022

ಮಂಜೇಶ್ವರ ಶಾಸಕರಿಗೆ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಕೆ

         ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳು ಇಂದು ನಿನ್ನೆಯದಲ್ಲ. ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು ಅವಿರತ ಪ್ರಯತ್ನಗಳು ಈಗಲೂ ನಡೆಯುತ್ತಾ ಇವೆ. ಕಾಸರಗೋಡಿನಲ್ಲಿ ಕನ್ನಡತನವನ್ನು ಉಳಿಸಿ ಬೆಳೆಸಲು ಇಲ್ಲಿನ ಕನ್ನಡ ಮಾಧ್ಯಮ ಶಾಲೆಗಳ ಪಾತ್ರ ಪ್ರಮುಖವಾದುದು. ಆದರೆ ಕನ್ನಡ ಮಾಧ್ಯಮದ ಶಾಲೆಗಳ ಅಧ್ಯಾಪಕರು ಹಾಗೂ ಮಕ್ಕಳು ಒಂದಿಲ್ಲೊಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿರುತ್ತಾರೆ.
        ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು ಇಂದು ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ ಕೆ ಎಂ ಅಶ್ರಫ್ ಅವರನ್ನು ಭೇಟಿ ಮಾಡಿ, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಧ್ಯಾಪಕರು ಹಾಗೂ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ನೀಡಿ, ಅದಕ್ಕೆ ಸೂಕ್ತವಾದ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಮನವಿಯನ್ನು ಸಲ್ಲಿಸಲಾಯಿತು. ಶಾಸಕರು ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ ಪಿ ಬಿ, ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಸದಸ್ಯರಾದ ಶ್ರೀ ಜಬ್ಬಾರ್ ಬಿ ತುರ್ತಾಗಿ ಶಾಸಕರನ್ನು ಕಂಡು ಮನವಿಯನ್ನು ಸಲ್ಲಿಸಿದರು.