FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Friday 22 April 2022

ಜಿಲ್ಲಾಧಿಕಾರಿ, ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿಗಳ ಭೇಟಿ : ಮನವಿ ಸಲ್ಲಿಕೆ

        ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ (ರಿ.) ಕಾಸರಗೋಡು ಇದರ ನಿಯೋಗವು ಇಂದು ಕಾಸರಗೋಡು ಜಿಲ್ಲಾಧಿಕಾರಿ, ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ಭೇಟಿಯಾಗಿ ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಕನ್ನಡೇತರ ಅಧ್ಯಾಪಕರನ್ನು ಮುಖ್ಯ ಶಿಕ್ಷಕರನ್ನಾಗಿ ನೇಮಿಸುವ ವಿರುದ್ಧ ಮನವಿಯನ್ನು ಸಲ್ಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಮನವಿ ಸಲ್ಲಿಸಲಾಯಿತು.

         ಜೊತೆಗೆ ಇತ್ತೀಚೆಗೆ ಕನ್ನಡ ಅಧ್ಯಾಪಕರಿಗೆ ಲೈಫ್ ಮಿಷನ್ ಕಾಸರಗೋಡು ಇದರ ಸರ್ವೆ ನಡೆಸಲು ಬಂದಿದ್ದು, ಅದರ ಮಾಹಿತಿಗಳು ಕನ್ನಡದಲ್ಲಿ ನೀಡುವಂತೆ ಮತ್ತೊಮ್ಮೆ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ನವೀನ್ ಕುಮಾರ್, ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ಬಾಬು ಕೆ ಇದ್ದರು. ಅಧಿಕಾರಿಗಳು ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದರು.





No comments:

Post a Comment