FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Tuesday, 5 May 2026

ಕನ್ನಡ ಅಧ್ಯಾಪಕ ಸಂಘದ ಕೇಂದ್ರ ಸಮಿತಿಯ ಮಹಾಸಭೆ :

        ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ (ರಿ) ಕಾಸರಗೋಡು ಇದರ ಕೇಂದ್ರ ಸಮಿತಿಯ ಮಹಾಸಭೆಯು ಇಂದು ಬೀರಂತಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯಿತು. 

       ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಕೇಶ್ ಎ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ  ವಾರ್ಷಿಕ ವರದಿ ವಾಚಿಸಿದರು. ಲೆಕ್ಕ ಪತ್ರವನ್ನು ಕೋಶಾಧಿಕಾರಿ ಶ್ರೀಮತಿ ಶ್ರೀ ಶರತ್ ಕುಮಾರ್  ಮಂಡಿಸಿದರು. ಬಳಿಕ ಸಂಘಟನಾತ್ಮಕ ಚರ್ಚೆ ನಡೆಯಿತು‌‌.  ಕುಂಬಳೆ ಉಪಜಿಲ್ಲಾ ಅಧ್ಯಕ್ಷರಾದ ಶ್ರೀಹರ್ಷ ಎಂ. ಪಿ, ಬೇಕಲ-ಹೊಸದುರ್ಗ ಉಪಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವಿಠಲ ಅಡ್ವಳ, ಕಾಸರಗೋಡು ಉಪಜಿಲ್ಲಾ ಅಧ್ಯಕ್ಷರಾದ ಶ್ರೀ ಕುಶ ಪಿ.ಎಲ್, ಕಾರ್ಯದರ್ಶಿ ಪೂರ್ಣಿಮಾ ಯಂ,ಕೋಶಾಧಿಕಾರಿ ಸುರೇಖಾ ಕೆ ಮಂಜೇಶ್ವರ ಉಪಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಎಂ,ಕೋಶಾಧಿಕಾರಿ ಕಿಶೋರ್ ಕುಮಾರ್ ಚರ್ಚೆಯಲ್ಲಿ ಭಾಗವಹಿಸಿದರು. 

       ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ , ಶ್ರೀಮತಿ ಶ್ರೀಲತಾ ಕೆ, ಕಾರ್ಯದರ್ಶಿಗಳಾದ ಜಯಪ್ರಶಾಂತ್ ಪಾಲೆಂಗ್ರಿ, ಪ್ರದೀಪ್ ಕೆ.ವಿ ಉಪಸ್ಥಿತರಿದ್ದರು.

       ಬಳಿಕ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಜಿ.ಡಬ್ಲ್ಯೂ.ಎಲ್.ಪಿ.ಶಾಲೆ ಮಂಜೇಶ್ವರದ ಮುಖ್ಯ ಶಿಕ್ಷಕ ಶ್ರೀ ಸುಕೇಶ್ , ಪ್ರಧಾನ ಕಾರ್ಯದರ್ಶಿಯಾಗಿ ಎ.ಎಲ್.ಪಿ.ಶಾಲೆ ಕಿಳಿಂಗಾರಿನ ಶಿಕ್ಷಕ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಪುನರಾಯ್ಕೆಯಾದರೆ, ಕೋಶಾಧಿಕಾರಿಯಾಗಿ ಎ.ಯು.ಪಿ ಶಾಲೆ ಬೋವಿಕ್ಕಾನದ ಶೀ ಪ್ರದೀಪ್ ಕೆ.ವಿ ಜತೆ ಕೋಶಾಧಿಕಾರಿಯಾಗಿ ಎ.ಎಸ್.ಬಿ.ಎಸ್.ಕುಂಟಿಕಾನದ ಶಿಕ್ಷಕ ಶ್ರೀ ಶರತ್ ಕುಮಾರ್  ಯಂ ಅವಿರೋಧವಾಗಿ ಆಯ್ಕೆಯಾದರು.

       ಉಪಾಧ್ಯಕ್ಷರಾಗಿ ಕೂಡ್ಲು ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಲತಾ ಕೆ , ವಿದ್ಯಾರಣ್ಯ ಎ.ಎಲ್.ಪಿ. ಶಾಲೆ ಬೆರಿಪದವಿನ ಮುಖ್ಯ ಶಿಕ್ಷಕ ಶ್ರೀ ಉಮೇಶ್ ಕೆ, ಎ.ಎಲ್.ಪಿ. ಶಾಲೆ ಇಚ್ಲಂಗೋಡಿನ ಮುಖ್ಯ ಶಿಕ್ಷಕ ಶ್ರೀ ಜಯರಾಮು ಸಿ. ಎಚ್, ಚಂದ್ರಗಿರಿ ಶಾಲಾ ಮುಖ್ಯ ಶಿಕ್ಷಕಿ ಯಶೋಧಾ, ಕಾರ್ಯದರ್ಶಿಗಳಾಗಿ ಜಿ.ಎಲ್.ಪಿ.ಶಾಲೆ ಕುಳೂರಿನ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಜಿ.ಎಚ್.ಎಸ್.ಎಸ್. ಕಾರಡ್ಕದ ಶಿಕ್ಷಕ ಡಾ. ಶ್ರೀಶ ಕುಮಾರ್ ಪಂಚಿತ್ತಡ್ಕ, ಎ.ಯು.ಪಿ. ಶಾಲೆ ಆನೆಕಲ್ಲಿನ ಶಿಕ್ಷಕ ಜೀವನ್ ಕುಮಾರ್ , ಜಿ.ಎಚ್.ಎಸ್.ಎಸ್. ಬೆಳ್ಳೂರು ಶಾಲೆಯ ಶಿಕ್ಷಕ ನವೀನ್ ಕುಮಾರ್ ಪಿ , ಸಂಘಟನಾ ಕಾರ್ಯದರ್ಶಿಯಾಗಿ ಜಿ.ಡಬ್ಲ್ಯೂ.ಎಲ್.ಪಿ.ಶಾಲೆ ಮಂಜೇಶ್ವರದ ಶಿಕ್ಷಕ ಶ್ರೀ ಜಬ್ಬಾರ್ ಬಿ, ಅಧಿಕೃತ ವಕ್ತಾರರಾಗಿ ಜಿ.ಎಚ್.ಎಸ್.ಎಸ್.ಬಂದಡ್ಕದ ಶಿಕ್ಷಕ ಶ್ರೀ ಬಾಬು ಕೆ, ಲೆಕ್ಕ ಪರಿಶೋಧಕರಾಗಿ ಜಿ.ಎಲ್.ಪಿ.ಶಾಲೆ ಪನೆಯಾಲದ ಶಿಕ್ಷಕ ಶ್ರೀ ಪುರುಷೋತ್ತಮ ಕುಲಾಲ್ ಹಾಗೂ ಜಿ.ಎಚ್.ಎಸ್.ಎಸ್. ಕಾಸರಗೋಡಿನ ಶಿಕ್ಷಕ ಶ್ರೀ ಅಬ್ದುಲ್ ರಹಿಮಾನ್ ಅವಿರೋಧವಾಗಿ ಆಯ್ಕೆಯಾದರು.

     ಕಾರ್ಯಕ್ರಮದಲ್ಲಿ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶ್ರೀ ಪ್ರದೀಪ್ ಕೆ.ವಿ ವಂದಿಸಿದರು. ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.









No comments:

Post a Comment